ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಪಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನನ್ನ ಶತ್ರುಗಳೆಲ್ಲ ಒಂದಾದರೂ ನನ್ನ ಸೋಲಿಸಲು ಆಗದು ಎಂದು ಸವಾಲು ಹಾಕಿ ಗೆದ್ದೇ ಬಿಟ್ಟೆ ಎಂಬ ಭ್ರಮೆಯಲ್ಲಿದ್ದಾರೆ. ಆಲ್ ಡೇಸ್ ನಾಟ್ ಸಂಡೇ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡ, ಹುಣಸೂರು ಕ್ಷೇತ್ರದಲ್ಲಿ ಎಚ್. ವಿಶ್ವನಾಥ್ ಸ್ಪರ್ಧೆ ಮಾಡಲಿದ್ದು ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಸಾಬೀತುಪಡಿಸುತ್ತೇವೆಂದರು.
plz vote for jds