ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡುವ ಕಡೆ ಗಮನ ಹರಿಸುವ ಬದಲು ದಿನ ನಿತ್ಯ ಬೆಳಗಾದರೆ ಜೆಡಿಎಸ್ ಪಕ್ಷದ ಪ್ರತಿ ನಡೆಯನ್ನು ಟೀಕಿಸುವುದು, ಜೆಡಿಎಸ್ ನಾಯಕರನ್ನು ಹೀಯಾಳಿಸುವುದು ಹೀಗೆ ಜೆಡಿಎಸ್ ಪಕ್ಷದೊಡನೆ ಕಾಲು ಕೆರದುಕೊಂಡು ಜಗಳ ಮಾಡುವುದನ್ನೇ ತಮ್ಮ ಕಸುಬನ್ನಾಗಿ ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಂದು ಜೆಡಿಎಸ್ ನಾವಿಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಚಳಿ ಬಿಡಿಸಿದ್ದಾರೆ.

ಸಿದ್ದರಾಮಯ್ಯಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟಿದ್ದೆ ಜೆಡಿಎಸ್ ಪಕ್ಷವಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷದಿಂದ ಉಚ್ಛಾಟನೆಗೊಂಡ ನಿಮಗೆ ಮಾತನಾಡುವ ಹಕ್ಕು ಇಲ್ಲ ಎಂದು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಕುಮಾರಸ್ವಾಮಿ ಅವರು ಸಿದ್ದುರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕುಮಾರಸ್ವಾಮಿ ಅವರು ಸಿದ್ದರಾಮಯ್ಯರ ಕುರಿತು ಇಂದು ಮಾಡಿರುವ ಟ್ವೀಟ್ ಗಳು ಇಂತಿವೆ:
ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ.
— H D Kumaraswamy (@hd_kumaraswamy) February 12, 2021
1/6
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?
— H D Kumaraswamy (@hd_kumaraswamy) February 12, 2021
2/6
ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್ನವರಾಗಿದ್ದರು.
— H D Kumaraswamy (@hd_kumaraswamy) February 12, 2021
3/6
ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ.
— H D Kumaraswamy (@hd_kumaraswamy) February 12, 2021
4/6
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ. ಅಲ್ಲಿಯವರೆಗೆ ಅವರು ತಾಳಲಿ.
— H D Kumaraswamy (@hd_kumaraswamy) February 12, 2021
5/6
ಜೆಡಿಎಸ್ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ.
— H D Kumaraswamy (@hd_kumaraswamy) February 12, 2021
ಜೆಡಿಎಸ್ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ.
6/6